ಬಳ್ಳಾರಿ : ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಬಳಿಯ ಚಿನ್ನಾಪೂರ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಭಾರೀ ಆತಂಕ ಸೃಷ್ಟಿಸಿದೆ.
ನೆನ್ನೆ ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೂರರಿಂದ 4 ಕಿಲೋಮೀಟರ್ ನಷ್ಟು ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ.
ಗುಡ್ಡದಲ್ಲಿ ಕರಡಿ, ಚಿರತೆ, ನವಿಲುಗಳು ಸೇರಿ ಅನೇಕ ಕಾಡು ಪ್ರಾಣಿಗಳಿದ್ದು, ಪ್ರಾಣಿ, ಪಕ್ಷಿ ಸಂಕುಲಕ್ಕೆ ಹಾನಿಯಾಗುವ ಭೀತಿ ಎದುರಾಗಿದೆ.
ಇನ್ನೂ ಈ ಘಟನೆ ನಡೆದ 3 ಗಂಟೆಗಳ ಬಳಿಕ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರೂ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.