ದಕ್ಷಿಣ ಭಾರತದ ಸ್ಟಾರ್ ಗಾಯಕಿ ಕಲ್ಪನಾ ರಾಘವೇಂದರ್ ಅವರು ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿದೆ.

ಹೈದರಾಬಾದ್‌ನ ನಿವಾಸದಲ್ಲಿ ಗಾಯಕಿ ಆತ್ಮಹತ್ಯೆಗೆ ಯತ್ನಿಸಿದ್ದು, 2 ದಿನಗಳಿಂದ ಮನೆಯ ಬಾಗಿಲುಗಳು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು ಗಾಯಕಿಯ ಮನೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗ ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ, ಅವರು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಲ್ಪನಾ ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಗಾಯಕಿಗೆ ಪ್ರಜ್ಞೆ ಬಂದಿದೆ. ಕಲ್ಪನಾಗೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದರು.

Leave a Reply

Your email address will not be published. Required fields are marked *