ಬೆಂಗಳೂರು : ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಸದನದಲ್ಲಿ ಕಿಡಿಕಾರಿದರು.

ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಮಾಡುವವರು ಅದರ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ಇವರಿಗೆ ಅಧಿಕಾರ ಕೊಟ್ಟು, ಪೆನ್ನು ಪೇಪರ್ ಕೊಟ್ಟಿದ್ದಾರೆ. ಅದಕ್ಕೆ ಇವರು ಹೇಗೆ ಬೇಕೋ ಹಾಗೆ ಬರೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇವರದ್ದು ದ್ವೇಷದ ರಾಜಕಾರಣ. ಕಾಂಗ್ರೆಸ್‌ನವರೇನೂ ಪ್ರೀತಿಯ ರಾಜಕಾರಣ ಮಾಡ್ತಾರಾ? ದ್ವೇಷ, ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *