ಡಿಸಿಎಂ ಡಿಕೆ ಶಿವಕುಮಾರ್ ಅವರು ಕಲಾವಿದರ ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಎಂದ ಹೇಳಿಕೆಯ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆಸಿದ್ದು, ಡಿಕೆಶಿ ಅವರು ನೀಡಿರುವ ಹೇಳಿಕೆ ಸರಿಯಲ್ಲ, ಅವರು ಹಾಗೆ ಮಾತನಾಡಬಾರದಿತ್ತು ಎಂದು ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಸರಿಯಲ್ಲ. ಬೆದರಿಸುವ ಉದ್ದೇಶ ಇಲ್ಲ ಅಂತ ಅವರೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಅವರು ಹೇಳಿದ ಹೇಳಿಕೆ ತಪ್ಪು. ಅವರ ಅವರು ಹೇಳಿದ ರೀತಿ ಕೆಲವರಿಗೆ ಇಷ್ಟ ಆಗಿಲ್ಲ. ಈ ವಿಚಾರವಾಗಿ ಡಿಕೆಶಿ ಅವರು ಕ್ಲ್ಯಾರಿಟಿ ಕೊಟ್ಟಿದ್ದಾರೆ. ಈ ವಿಚಾರವನ್ನು ನಾವು ಇಲ್ಲಿಗೆ ಬಿಡೋದು ಒಳ್ಳೆಯದು ಎಂದು ಹೇಳಿದ್ದಾರೆ.
ಫಿಲ್ಮ್ ಫೆಸ್ಟಿವಲ್ಗೆ ಒಂದು ವಾರದ ಹಿಂದೆಯೇ ನನಗೆ ಆಹ್ವಾನ ಬಂದಿತ್ತು. ಬೇರೆಯವರಿಗೆ ಆಹ್ವಾನ ಹೋಗಿದ್ಯೋ ಇಲ್ವೋ ನನಗೆ ಗೊತ್ತಿಲ್ಲ. ನನಗೆ ಆಹ್ವಾನ ಬಂದಿದೆ, ಹಾಗಾಗಿ ನಾನು ಈಗ ಫಿಲ್ಮ್ ಫೆಸ್ಟಿವಲ್ಗೆ ಹೋಗ್ತಿದ್ದೀನಿ. ಈ ವೇಳೆ, ನಾಡು, ನುಡಿ, ಜಲದ ವಿಚಾರದಲ್ಲಿ ಯಾವುದೇ ಆಹ್ವಾನ ಬೇಕಿಲ್ಲ. ಎಲ್ಲರೂ ಅವರಾಗಿಯೇ ಬರಬೇಕು. ಇದ್ಯಾವ್ದೋ ಮದುವೆ, ಪಾರ್ಟಿ ಅಲ್ಲ. ಇವತ್ತು ನಾನೂ ಫಿಲ್ಮ್ ಫೆಸ್ಟಿವಲ್ಗೆ ಹೋಗುತ್ತಿದ್ದೇನೆ ಎಂದರು.