ಮಂಡ್ಯ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ಯುವ ಸಮೂಹ ಕೃಷಿಯ ಕಡೆ ಒಲವು ತೋರಿಸಿ, ಉತ್ತೇಜನ ನೀಡಬೇಕೆಂಬ ಉದ್ದೇಶದಿಂದ ಶ್ರೀರಂಗಪಟ್ಟಣ ವಿಧಾನಸಭಾ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ನಾಟಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದ ಸುಖೇಂದ್ರ ಹಾಗೂ ಶಿವಬಸಪ್ಪ ಎಂಬುವವರ 2 ಎಕ್ರೆ ಗದ್ದೆಯಲ್ಲಿ ನಾಟಿ ಕಾರ್ಯಕ್ರಮ ನಡೆಯಲಿದೆ. ವಿಜಯೇಂದ್ರ ಅವರು ಗದ್ದೆಗಿಳಿದು ನಾಟಿ ಮಾಡಲಿದ್ದಾರೆ. ಬಳಿಕ ರೈತರ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಲಿದ್ದಾರೆ.

ಊರಲ್ಲಿ ನಾಲ್ಕೈದು ಎಕ್ರೆ ಜಮೀನು ಇದ್ದರೂ ಸಹ ಯುವಕರು ಕಡಿಮೆ ಸಂಬಳಕ್ಕೆ ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಕೃಷಿ ಮಾಡುವವರ ಸಂಖ್ಯೆ ಕಡಿಮೆ ಆಗುವುದರ ಜೊತೆಗೆ, ಯುವಸಮೂಹದ ಆರ್ಥಿಕ ಪರಿಸ್ಥಿತಿಯೂ ಕಡಿಮೆ ಆಗುತ್ತಿದೆ.

ಈ ನಿಟ್ಟಿನಲ್ಲಿ ಯುವಕರನ್ನು ಕೃಷಿ ಕಡೆ ತರಬೇಕು. ಕೃಷಿಯನ್ನು ಉದ್ಯಮವಾಗಿ ಬೆಳೆಯಬೇಕೆಂಬ ಆಶಯದಿಂದ ಶ್ರೀರಂಗಪಟ್ಟಣ ವಿಧಾನಸಭಾ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ನಾಟಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

Leave a Reply

Your email address will not be published. Required fields are marked *