ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ.? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು..? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೇ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ನಾಳೆ ಶಾಸಕರು, ಸಂಸದರು, ಎಮ್ ಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿಯಾಗ್ತಾರೆ.

ಕುಮಾರಸ್ವಾಮಿ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ದ ಪ್ರಾಸಿಕ್ಯೂಷನ್ ಗೆ ಒತ್ತಾಯ ಮಾಡ್ತಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ಆಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಪ್ರಾಸಿಕ್ಯೂಷನ್ ಅನುಮತಿ ಕೊಟ್ಟಿಲ್ಲ. ಹೀಗಾಗಿ ನಾಳೆ ನಮ್ಮ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯ ಮಾಡ್ತಾರೆ ಎಂದರು.

ಬಿಜೆಪಿ ಹೈಕಮಾಂಡ್ ನನ್ನನ್ನು ಟಾರ್ಗೆಟ್ ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಟಾರ್ಗೆಟ್ ಮಾಡಿದ್ದಾರೆ. ನಮ್ಮ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಮಾಡಿದ್ದಾರೆಂದರು.

ಬಿಜೆಪಿಯವರು ಎಂದೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ .ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ಮತ್ತೆ ಆಪರೇಷನ್ ಮಾಡೋ ಪ್ರಯತ್ನಗಳನ್ನು ನಡೆಸಿದ್ದಾರೆ.


ರವಿ ಗಣಿಗ ನನ್ನ ಮುಂದೆ ಕೂಡಾ ಹೇಳಿದ್ದಾರೆ.‌ಶಾಸಕರಿಗೆ 100 ಕೋಟಿ ಆಫರ್ ಮಾಡಿರೋ ಬಗ್ಗೆ ಹೇಳಿದ್ದಾರೆ. ಅವರ ಮಾತಾಡಿರೋ ವಿಚಾರ ನನಗೂ ಹೇಳಿದ್ರು. ಅದು ಸತ್ಯ ಇರಬಹುದು ಯಾಕೆಂದರೆ ಬಿಜೆಪಿ ಯಾವಗಲೂ ಸಂಪೂರ್ಣ ಬಹಮತದಿಂದ ಅಧಿಕಾರಕ್ಕೆ ಬಂದಿಲ್ಲ.
ಹಿಂಬಾಗಿಲ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ.ಹೀಗಾಗಿ ಸರ್ಕಾರ ಅಸ್ಥಿರ ಗೊಳಿಸೋ ಪ್ರಯತ್ನ ನಡೀತಿದೆ ಎಂದು ಆರೋಪಿಸಿದರು.

ಮುಡಾ ಹಗರಣದ ಕುರಿತು ನಾಳೆ ವಿಚಾರಣೆ ಇದೆ.ವಿಚಾರಣೆ ಮುಗಿಲಿ ನೋಡೋಣ . ರಾಷ್ಟ್ರಪತಿಗಳ ಭೇಟಿ ಮಾಡುವ ಉದ್ದೇಶ ಇಲ್ಲ. ಸದ್ಯ ಅದನ್ನು ವಿಚಾರ ಮಾಡಿಲ್ಲ ಎಂದರು.

ದರ್ಶನ ಜೈಲಿನಲ್ಲಿ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರ ಗೊತ್ತಾದ ತಕ್ಷಣ 9 ಜನರನ್ನು ಅಮಾನತ್ತು ಮಾಡಿದ್ದೇವೆ. ದರ್ಶನ ಸೇರಿ ಕೆಲವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಿದ್ದೇವೆ ಡಿಜಿಗೂ ಕೂಡಾ ನೋಟಿಸ್ ಕೊಟ್ಟಿದ್ದೇವೆ.ಜೈಲಿನ ಡಿಜಿಗೆ ನೋಟಿಸ್ ಕೊಟ್ಟಿದ್ದೇವೆ ಎಂದರು.

ಮುಡಾ ಮಾಜಿ ಆಯುಕ್ತರ ವರ್ಗಾವಣೆ ವಿಚಾರ ನನಗೆ ಮಾಹಿತಿ ಇಲ್ಲ. ಅನುದಾನ ಹಂಚಿಕೆ ವಿಚಾರವಾಗಿ 16 ಹಣಕಾಸು ಆಯೋಗಕ್ಕೆ ಪತ್ರ ವಿಚಾರ 15 ಹಣಕಾಸು ಆಯೋಗದಲ್ಲಿ ನಮಗೆ ಬರಬೇಕಿದ್ದ 80 ಸಾವಿರ ಕೋಟಿ ಬಂದಿಲ್ಲ .

ಅನುದಾನಕ್ಕಾಗಿ ನಾವು ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಹೀಗಾಗಿ ಅನ್ಯಾಯ ಸರಿಪಡಿಸುವಂತೆ 16 ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.

Leave a Reply

Your email address will not be published. Required fields are marked *