ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯ ಸಮಸ್ಯೆದಿಂದ ಬಳಲುತ್ತಿದ್ದ ಕನ್ನಡ ಚಲನಚಿತ್ರ ರಂಗದ ಯಶಸ್ವಿ ನಿರ್ದೇಶಕ ಎಸ್.ಉಮೇಶ್ ಇಂದು ನಿಧನ ಹೊಂದಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಉಮೇಶ್‌ ಚಿಕಿತ್ಸೆ ಫಲಕಾರಿಯಾಗದೇ ಇಂದು (ಫೆ.21) ನಿಧನ ಹೊಂದಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗರಲ್ಲಿ ಯಶಸ್ವಿ ನಿರ್ದೇಶಕ ಎನಿಸಿಕೊಂಡಿದ್ದ ಉಮೇಶ್‌ ಅವರು, ‘ಅವನೇ ನನ್ನ ಗಂಡ’, ‘ನನಗೂ ಹೆಂಡತಿ ಬೇಕು’, ‘ತುಂಬಿದ ಮನೆ’,‌ ‘ರಾಜ ಕೆಂಪು ರೊಜ’, ‘ಅವಳೆ ನನ್ನ ಹೆಂಡ್ತಿ’, ಎಲ್ಲರಂಥಲ್ಲ ನನ್ನ ಗಂಡ ಇನ್ನೂ ಕೆಲವು ಸಿನಿಮಾಗಳನ್ನ ನಿರ್ದೇಶಿಸಿದ್ದ ಸೈ ಎನಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *