ವಿಜಯಪುರ : ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಪತ್ರದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ರಾಜ್ಯಪಾಲರಾದ ಥಾವರ್ಚಂದ ಗೆಹ್ಲೋಟ್ ಅವರಿಗೆ ಪತ್ರ ಬರೆದು ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು.
ಸದನದಲ್ಲಿ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ (ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಶಾಸಕ ಯತ್ನಾಳ್ ವಿನಂತಿಸಿದ್ದಾರೆ.